'ಕೆಪಿಐಟಿ ಕಮ್ಮಿನ್ಸ್'ನ ಸಾಮಾಜಿಕ ಕಳಕಳಿನಗರದ ಕೆಲವು ಐಟಿ ಕಂಪನಿಗಳು ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ತಮ್ಮದೇ ಆದ ಕೊಡುಗೆ ನೀಡುತ್ತಿರುವುದು ಅತ್ಯಂತ ಹರ್ಷದಾಯಕ. ಉತ್ತಮ ಸಾಮಾಜಿಕ ಕಳಕಳಿಯೊಂದಿಗೆ ಹಲವರ ನೋವುಗಳಿಗೆ ಹಾಗೂ ಪ್ರಕೃತಿ ವಿಕೋಪಗಳಿಗೆ ಸ್ಪಂದಿಸುತ್ತಿರುವ ನಮ್ಮ ದೇಶದ ಹೆಮ್ಮೆಯ ಕಂಪನಿಗಳ ಸಾಲಿಗೆ ಸೇರುವ ನಗರದ 'ಕೆಪಿಐಟಿ ಕಮಿನ್ಸ್' ಎಂಬ ಕಂಪನಿ ನೆರೆ ಪರಿಹಾರಕ್ಕಾಗಿ ತನ್ನ ಉದ್ಯೋಗಿಗಳಿಗೆ ಸಹಾಯ ಮಾಡಲು ಕರೆ
ದಟ್ಟಣೆ ಹೆಚ್ಚಿಸುತ್ತಿರುವ ರಸ್ತೆ ವಿಭಜಕಗಳುಈಗ್ಗೆ ಕೆಲ ತಿಂಗಳುಗಳ ಹಿಂದಿನ ತನಕ ಬನಶಂಕರಿ ಎರಡನೇ ಹಂತದ ಒಂದು ಮುಖ್ಯವಾದ ರಸ್ತೆಯಲ್ಲಿ ಸುಮಾರು ಮುಕ್ಕಾಲು ಅಡಿಯ ರಸ್ತೆ ವಿಭಜಕಗಳಿದ್ದವು. ಅವು ಅತ್ಯಂತ ಸರಳವಾಗಿದ್ದವು ಹಾಗೂ ಅಷ್ಟೇ ಪರಿಣಾಮಕಾರಿಯಾಗಿಯೂ ಇದ್ದವು. ಎಂದೂ ವಾಹನ ದಟ್ಟಣೆಗಾಗಲೀ ಅಥವಾ ಇನ್ಯಾವುದೇ ಅಹಿತಕರ ಘಟನೆಗಳಿಗಾಗಲೀ ಆಸ್ಪದವಿರಲಿಲ್ಲ. ಆದರೆ, ನಂತರ ಕೆಲ ಆ ಎಲ್ಲವನ್ನೂ ಕಿತ್ತು ಹಾಕಿ ಮೂರರಿಂದ ನಾಲ್ಕು ಅಡಿ..
ಇದೂ ಕೂಡ ಭಾರತದಲ್ಲಿ ಮಾತ್ರ ಸಾಧ್ಯಕೆಲವರಿಗೆ ಭಾರತದಲ್ಲಿನ ಭ್ರಷ್ಟಾಚಾರ, ಜಾತಿ ವ್ಯವಸ್ಥೆ, ಬಡತನದ ಬಗ್ಗೆ ಬರೆದು ಕಡೆಯಲ್ಲಿ ತಮ್ಮ ಅಂಕಿತವನ್ನು ಇವೆಲ್ಲ ಭಾರತದಲ್ಲಿ ಮಾತ್ರ ನಡೆಯಲು ಸಾಧ್ಯ ಎಂದು ಬರೆಯುವುದು ರೂಢಿ. ಹಾಗೆಯೇ ಲೆಕ್ಕವಿಲ್ಲದಷ್ಟು ಒಳ್ಳೆಯ ಕೆಲಸಗಳೂ ಭಾರತದಲ್ಲಿ ಮಾತ್ರ ನಡೆಯಲು ಸಾಧ್ಯ ಎಂಬುದು ಜಗತ್ತಿಗೇ ಗೊತ್ತಿರುವ ವಿಷಯ.ರಾಜ್ಯದಲ್ಲಿ ನಡೆಯುತ್ತಿರುವ ನೆರೆ ಪರಿಹಾರದ ಕುರಿತಾಗಿನ ಪಾದಯಾತ್ರೆಗಳು ಹಾಗೂ ಇನ್ನಿತರ ಕಾರ್ಯಕ್ರಮಗಳ ಕುರಿತು, ಮೊನ್ನೆ..
ಭಯೋತ್ಪಾದನೆ ವಿರುದ್ಧ ಯಾರು ಹೋರಾಡಬೇಕು?ಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ..
ವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ..
ಗೋಹತ್ಯೆ ನಿಷೇಧಕ್ಕೆ ಮುಸ್ಲಿಮರ ಚಳವಳಿಜೂನ್ 7ರಂದು ರಾಯ್ಪುರದಲ್ಲಿ ನಡೆದ ಮುಸ್ಲಿಂ ರಾಷ್ಟ್ರೀಯ ಮಂಚ್ನ ತರಬೇತಿ ಶಿಬಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಸರಸಂಘಚಾಲಕರಾದ ಕು.ಸೀ.ಸುದರ್ಶನ್, ಛತ್ತೀಸ್ಘಡ್ನ ಮುಖ್ಯಮಂತ್ರಿ ಡಾ||ರಮಣ್ ಸಿಂಘ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಭಾಗವಹಿಸಿದ್ದರು.ದೇಶದ ಸುಮಾರು 15 ರಾಜ್ಯಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸುದರ್ಶನ್, ಬ್ರಿಟಿಷರು ತಮ್ಮ ಸ್ವಾರ್ಥಕ್ಕೋಸ್ಕರ..
ಸಂಸ್ಕೃತದ ಜ್ಞಾನ ಎಲ್ಲ ವರ್ಗಗಳಿಗೂ ಲಭಿಸುವಂತಾಗಲಿಬೆಂಗಳೂರಿನಲ್ಲಿ ನಡೆದ 5ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸಂಸ್ಕೃತ ವಿಶ್ವವಿದ್ಯಾಲಯ ಬೇಡ ಎನ್ನುವ ವಿಷಯದ ಕುರಿತಾಗಿ ಕಾಮಿಡಿಗಳನ್ನು ಮಾಡಲಿಕ್ಕೇ ಸೀಮಿತವಾದಂತಿತ್ತು!ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಏನು ಮಾಡಬೇಕು ಎಂದು ಚಿಂತಿಸುವುದನ್ನು ಬಿಟ್ಟು ನಕಾರಾತ್ಮಕ ಧೋರಣೆಯಡಿ ಸಂಸ್ಕೃತ ವಿವಿ ಬೇಡ ಅಂತ ಹೇಳಲಿಕ್ಕೆಂದು ಕೆಲ ಸಾಹಿತಿಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಸಾಹಿತಿಗಳ ಬೌದ್ಧಿಕ ಡೋಂಗಿತನದ ಪರಮಾವಧಿಯಾಗಿದೆ.ಕಿ.ರಂ.ನಾಗರಾಜ್ರವರು ತಮ್ಮನ್ನು ತಾವು..
ವಿರಾಟ್ ಹಿಂದೂ ಸಮಾಜೋತ್ಸವದ ಸತ್ಪರಿಣಾಮಎರಡು ವರ್ಷಗಳ ಹಿಂದೆ, ಬಹುತೇಕ ರಾಜ್ಯದ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಸಂಘಪರಿವಾರದ ಕಡೆಯಿಂದ ನಡೆದ ವಿರಾಟ್ ಹಿಂದೂ ಸಮಾಜೋತ್ಸವದ ವಿರುದ್ಧ ಅತ್ಯಂತ ಸಹಜವಾಗಿಯೇ ಕೆಲವು ಜನ ಪ್ರತಿಭಟನೆ ಮಾಡಿದ್ದರು. ಆ ಮೂಲಕ ತಮ್ಮ ಪ್ರತಿಭಟನಾ ಹಕ್ಕನ್ನು ಚಲಾಯಿಸಿದ್ದರು. ಆದರೆ ಈ ಕಾರ್ಯಕ್ರಮಗಳ ಕಾರಣದಿಂದ ಸಮಾಜದಲ್ಲುಂಟಾದ ಪರಿಣಾಮಗಳ ಕುರಿತು, ಯಾವ ಪ್ರತಿಭಟನಾಕಾರರಾಗಲೀ, ವಿಚಾರವಾದಿಗಳಾಗಲೀ ಚಿಂತನೆ ನಡೆಸುವ ಪ್ರಾಮಾಣಿಕ ಪ್ರಯತ್ನ..
ಬಿಜೆಪಿಗೆ ಇನ್ನಾದರೂ ಜ್ಞಾನೋದಯವಾದೀತೇ?ಭಯೋತ್ಪಾದನೆಯಂತಹ ಅತಿ ಮುಖ್ಯವಾದ ಹಾಗೂ ಹೆಚ್ಚು ಮಹತ್ವವಾದ ವಿಷಯವನ್ನೇ ಚುನಾವಣೆಯಲ್ಲಿ ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದ ಬಿಜೆಪಿಗೆ ಇನ್ಯಾವ ವಿಷಯವನ್ನೂ ಬಳಸಿಕೊಳ್ಳಲು ಸಾಧ್ಯವಿಲ್ಲ.* ಮತ್ತೂರು ರಘುಅಂತೂ ಇಂತೂ ಚುನಾವಣಾ ಯುದ್ಧ ಮುಗಿದು, ಹೊಸ ವೇಷದಲ್ಲಿ ಹಳೇ ಸರ್ಕಾರ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದು ಆಡಳಿತಕ್ಕೆ ನಿಂತಿದೆ. ಸಂಪುಟ ರಚನೆ ಎಂಬ ದೊಂಬರಾಟದಲ್ಲಿ ಮುಳುಗಿದೆ. ಪರಾಭವಗೊಂಡಿರುವ ಭಾರತೀಯ ಜನತಾ ಪಕ್ಷದಲ್ಲಂತೂ..