ಹೀಗೊಂದು ಸಂಜೆಸೂರ್ಯಾಸ್ತವಾಗುತ್ತಿತ್ತು. ಸಂಜೆ, 6.30ಯ ಸಮಯ. ಕೈಕಾಲು ಮುಖ ತೊಳೆದು, ಟ್ರಿಮ್ ಆಗಿ ಡ್ರೆಸ್ ಮಾಡಿಕೊಂಡು ಅವಳ ಮನೆಗೆ ಹೊರಟೆ. ನನ್ನ ಹತ್ರ ಆ ದೂದ್ವಾಲಾ ಟೈಪ್ ಹ್ಯಾಂಡಲ್ ಇರುವ ಅಟ್ಲಸ್ ಸೈಕಲ್ ಇತ್ತು. ಅದನ್ನು ತೆಗೆದುಕೊಂಡು ಹೋಗೋಕೆ ಇಷ್ಟವಾಗಲಿಲ್ಲ. ನಡೆದುಕೊಂಡೆ ಹೋದೆ. ಅವಳಿಗಿನ್ನು ಕಾಲೇಜ್ ಶುರುವಾಗಿರಲಿಲ್ಲ. ನನಗೆ ಶುರುವಾಗಿ 15 ದಿವಸಗಳಾಗಿದ್ದವು. ಅವಳಿಗೇನೋ ಕಾಲೇಜ್ ಬಗ್ಗೆ ತಿಳಿದುಕೊಳ್ಳಬೇಕಿತ್ತಂತೆ.
ಸಂಭ್ರಮತಾಳಿ ಕಟ್ಟಿದವನೊಂದಿಗೆ ಹಾಗೂ ಹೀಗೂ ಬಡಿದಾಡಿಕೊಂಡು ಸಾಯಬಹುದು ಆದರೆ, ನೀವು ಏನೇ ಹೇಳಿ, ತಾಳಿ ಕಿತ್ತಿ ಆಚೆಬಂದವರು ಸಮಾಜದೊಂದಿಗೆ ಬಡಿದಾಡಿಕೊಂಡು ಬದುಕುವುದು ಕಷ್ಟಕ್ಕಿಂತ ಕಷ್ಟ. ವಿಚ್ಛೇದನೆಗೊಂಡಿದ್ದರೂ ಸ್ವಾಭಿಮಾನದಿಂದ ಜೀವನ ಸಾಗಿಸುತ್ತಿದ್ದ ಸಂಭ್ರಮಳಿಗೆ ಆ ಒಂದು ಕ್ಷಣವಂತೂ ತೀರ ಕ್ರೂರವೆನಿಸಿರಬೇಕು. ನಾನು ನನ್ನಿಷ್ಟ ಎಂಬ ಮಂತ್ರ ಜಪಿಸಿಕೊಂಡು, ಕುಂಟು ನೆಪ ಹೇಳಿ ಒಂದು ದಿನ ಮನೆ ಬಿಟ್ಟ ಅವಳು..
ನರನಾರಿ ನೀರುಪುಢಾರಿ* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು...
ಆತಂಕರಿಸೆಷನ್ ಎಂಬ ಭೂತ ಎಂಥವರನ್ನೂ ಕಂಗೆಡಿಸಿಬಿಡುತ್ತದೆ. ಆರ್ಥಿಕವಾಗಿ ಎಂಥ ಬಲಾಡ್ಯವಾಗಿದ್ದರೂ ಬಿಕ್ಕಟ್ಟಿನ ಛಳಕು ನಡುಕ ಹುಟ್ಟಿಸಿಬಿಡುತ್ತದೆ. ತಳ್ಳುವ ಪ್ರತಿದಿನವೂ ಸೂಜಿ ಮೊನೆಯ ಮೇಲೆ ತಪಸ್ಸು ಆಚರಿಸಿತಂಥ ಅನುಭವ. ಆ ಸುಳಿಗೆ ಸಿಕ್ಕವನ ಯೋಜನಾ ಲಹರಿಯ ದಿಕ್ಕನ್ನು ಕೂಡ ತಪ್ಪಿಸಿಬಿಡುತ್ತದೆ. ಆತ ಕೂಡ ಅಂಥದೇ ಸುಳಿಗೆ ಸಿಲುಕಿದ್ದ...* ರಾಧಿಕಾ ಎಮ್.ಜಿ., ಬೆಂಗಳೂರುI am not convinced with this..
ಸಣ್ಣಕಥೆ : ವಾಸ್ತವಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು..
ಸಣ್ಣಕಥೆ : ವಾಸ್ತವ (ಭಾಗ 2)(ಕಥೆ ಮುಂದುವರಿದಿದೆ)ಅವನಿಗೆ ಕುಳಿತಲ್ಲಿ ನಿಂತಲ್ಲಿ ನಿಯಂತ್ರಣ ಮೀರಿದ ತನ್ನ ವರ್ತನೆಯ ಭಯ ಆವರಿಸತೊಡಗಿತು. ಸ್ವಾಮೀಜಿಯ ಬಳಿ ಕ್ಷಮಾಪಣೆ ಕೇಳಲು ಅವನು ಸಿದ್ಧನಿದ್ದ. ಆದರೆ ಸ್ವಾಮೀಜಿಯ ಪರಿವಾರ ಇವನನ್ನು ಮಠದ ಆವರಣ ಪ್ರವೇಶಕ್ಕೆ ಅವಕಾಶ ಕೊಡಲಿಲ್ಲ. ಸ್ವಾಮೀಜಿ ದರ್ಶನಕ್ಕೆ ಪೂರ್ಣ ಪ್ರಮಾಣದ ಮನಸ್ಸಿನಿಂದ ಆತನಿಗೆ ಹೋಗಲು ಧೈರ್ಯವಿರಲಿಲ್ಲ. ಮತ್ತೆ ಮೊದಲಿನಂತೆ ಆದರೆ ಎಂಬ ಹೆದರಿಕೆ. ಮನೋವೈದ್ಯರ ಭೇಟಿ ಮಾಡುವುದೇ..
ಸಣ್ಣಕಥೆ : ವಾಸ್ತವ (ಭಾಗ 3)(ಕಥೆ ಮುಂದುವರಿದಿದೆ)ಸ್ವಾಮೀಜಿಗಳನ್ನು ಮಂತ್ರಘೋಷಗಳ ಜತೆಗೆ ಪೂರ್ಣಕುಂಭದೊಂದಿಗೆ ಊರಿಗೆ ಸ್ವಾಗತಿಸಲಾಯಿತು. ಸ್ವಾಮೀಜಿ ಪೀಠವನ್ನು ಅಲಂಕರಿಸಿದರು. ಅವನು ತನ್ನ ಕುಟುಂಬದೊಂದಿಗೆ ಒಂದು ಕಡೆ ಹತಾಶನಾಗಿ ಕುಳಿತಿದ್ದ. ನೂರಾರು ಜನರು ಸೇರಿದ್ದರು. ಗುರುಪೀಠವನ್ನು ವಿರೋಧಿಸುವ ಗುಂಪು ಕೂಡ ಈ ವಿಷಯದಲ್ಲಿ ರಾಜಿಯಾದಂತೆ ಅಲ್ಲಿ ಸೇರಿದ್ದರು. ನಾಸ್ತಿಕರಿಗೂ ಕುತೂಹಲ ಹಾಗಾಗಿ ಅವರೂ ಅಂಗಿ ಬಿಚ್ಚಿ ಶಲ್ಯ ಹೊದ್ದು ಬಂದಿದ್ದರು. ಮಠಕ್ಕೆ ದೇಣಿಗೆ..
ನಂಬಕೂಡದ ಸತ್ಯಕಥೆರಾತ್ರಿಯ 10-30ರ ಸಮಯ ತಲೆಯ ಮೇಲೆ ಕೆಂಪು ದೀಪವನ್ನಿಟ್ಟು ಕೊಂಡು ಮಲ್ಯ ಆಸ್ಪತ್ರೆಯ ಅಂಬ್ಯುಲೆನ್ಸ್ ಪುಣೆ ಹೈವೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಡ್ರೈವರ್ ಆನಂದ ಸತತವಾಗಿ ಅಳುತ್ತಿದ್ದ ಸಂತೂವನ್ನು ಸಮಾಧಾನಪಡಿಸಲು ಹೆಣಗಾಡಿ ಸೋತಿದ್ದ. ಪಿತೃವಿಯೋಗ ಎಂದರೆ ಕೆಲವರಿಗೆ ಹಾಗೆಯೇ ಒಂದು ದಿನದಲ್ಲಿ ಅತ್ತೂ ಕರೆದು ಖಾಲಿ ಆಗುವುದಲ್ಲ. ಅದರಲ್ಲಿಯೂ ಸಂತೂ ಉರೂಫ್ ಸಂತೋಷನಿಗೆ ಸ್ವಪ್ನದಲ್ಲಿಯೂ ತಂದೆಯನ್ನ ಬಿಟ್ಟು..
ಮರಾಠಿ ಚಂದ್ರುಚಂದ್ರು ಅಂಥವರು ಸಮಾಜದ ಎಲ್ಲ ಸ್ತರಗಳಲ್ಲಿಯೂ ಹಾಸುಹೊಕ್ಕಾಗಿದ್ದಾರೆ. ಅವರು ಇಂಥದೇ ಜಾತಿ, ಪಂಗಡಕ್ಕೆ ಸೇರಿರಬೇಕೆಂದಿಲ್ಲ. ಮತ್ತು ಅಂಥವರು ನಮ್ಮ ನಿಮ್ಮ ನಡುವೆಯೇ ಇರುತ್ತಾರೆ. ಮರಾಠಿ ಚಂದ್ರು ಅಂಥವರನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಕೂಡ ಇರುತ್ತಾರೆ.* ರಾಜೇಂದ್ರ ಎಚ್ಆರ್, ಬೆಂಗಳೂರುಹೆಸರಿನಲ್ಲೇನಿದೆ ಸ್ವಾಮಿ, ಮರಾಠಿ ಚಂದ್ರುಗೆ ಕನ್ನಡವೇ ಸರಿಯಾಗಿ ಬರೋಲ್ಲ, ಇನ್ನು ಮರಾಠಿ ಎಲ್ಲಿಂದ ಬರುತ್ತೆ...? ಇವನು ಚಿಕ್ಕಮಗಳೂರಿನ ಒಂದು..
ಪ್ರೇಮಶೇಖರ ಸಣ್ಣಕಥೆ ಕ್ರೌರ್ಯ* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ..