clear
clear
clear
clear
ಮುಖಪುಟ » ಚಲನಚಿತ್ರ » ನಾಯಕ » ಪೂರ್ಣಪಾಠ
ಬೆಂಗಳೂರಿನಲ್ಲಿ ಶಿವಣ್ಣನ 'ತಮಸ್ಸು'

ಇದೇ ಮೊದಲ ಬಾರಿಗೆ ಆಕ್ಷನ್, ಕಟ್ ಹೇಳುತ್ತಿರುವ ಅಗ್ನಿ ಶ್ರೀಧರ್ ಅವರ 'ತಮಸ್ಸು' ಚಿತ್ರಕ್ಕೆ ಉದ್ಯಾನ ನಗರಿ ಬೆಂಗಳೂರು ಹಾಗೂ ಅದರ ಸುತ್ತಲ್ಲಿನ ಪ್ರದೇಶಗಳಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರವನ್ನು ಮೇಘ ಮೂವೀಸ್ ಲಾಂಛನದಲ್ಲಿ ಸೈಯದ್ ಅಮಾನ್ ಹಾಗೂ ರವೀಂದ್ರ ನಿರ್ಮಿಸುತ್ತಿದ್ದಾರೆ.

ತಮ್ಮ ಸಂಸ್ಥೆಯ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ನಿರ್ಮಾಪಕರು ತಮ್ಮ ಸಂಸ್ಥೆಯ ನಾಲ್ಕನೇ ಕಾಣಿಕೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 'ಆ ದಿನಗಳು' ಎಂಬ ಯಶಸ್ವಿ ಚಿತ್ರ ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದ ಪತ್ರಕರ್ತ ಅಗ್ನಿಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಕಥೆಗಾರರಾಗಿರುವ ಅವರು ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ.

ವಿಶಿಷ್ಟ ಕಥಾ ಸಾರಾಂಶವುಳ್ಳ 'ತಮಸ್ಸು' ಚಿತ್ರದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿದ್ದು, ಪದ್ಮಪ್ರಿಯ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ನಾಜಿರ್, ಹರ್ಷಿಕಾ ಪೂರ್ಣಚ್ಛ, ಆಸೀಫ್, ಸುಧಾ ಬೆಳವಾಡಿ, ಸತ್ಯ ಮುಂತಾದವರ ತಾರಾಬಳಗವೂ ಈ ಚಿತ್ರಕ್ಕಿದೆ.

ಸಂದೀಪ್ ಚೌಟರ ಸಂಗೀತವಿರುವ ಈ ಚಿತ್ರಕ್ಕೆ ಸುಂದರನಾಥ ಸುವರ್ಣ ಅವರ ಛಾಯಾಗ್ರಹಣವಿದೆ. ನಾಗೇಂದ್ರ ಅರಸ್ ಸಂಕಲನ, ಡಿಫ಼ರೆಂಟ್ ಡ್ಯಾನಿ ಸಾಹಸ, ಶಶಿಧರ್ ಅಡಪ ಕಲಾ ನಿರ್ದೇಶನ ಹಾಗೂ ಮಧುಗಿರಿ ಪ್ರಕಾಶ್ ಅವರ ನಿರ್ಮಾಣ ನಿರ್ವಹಣೆ ‘ತಮಸ್ಸು ಚಿತ್ರಕ್ಕಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ನವೆಂಬರ್ 3, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]
ಇಂದ: Prithwi
ದಿನಾಂಕ: 09 Nov 2009 11:01 am
Shivanna role filled with ego and anger ,a complex and class role indeed.One and only Shivanna can do all types of roles with ease.

ಇಂದ: ಪಾಪಿ ಲೋಕದ ಸ್ತ್ರಿಧರ
ದಿನಾಂಕ: 04 Nov 2009 1:15 am
ಕೊಲೆಗುಡುಕ , ಭೂಗತ ಜಗತ್ತಿನ ಪಾಪಿ, ಅಗ್ನಿ ಶ್ರೀಧರನ ಚಿತ್ರ ತೋಪಾಗಲಿ .

[ ಅಭಿಪ್ರಾಯ ಬರೆಯಿರಿ ]
  ಸುದ್ದಿ-ರಂಜನೆ
  ವಿಡಿಯೋ
  ನುಡಿಚಿತ್ರಗಳು