clear
clear
clear
clear
   
  BSE  13,853.70 +453.38   NSE  4111.40 +137.35   RS/$ 49.40 71.00  at:16:10 Hrs (IST) Jul 14  
clear
  ಮುಖಪುಟ    ಸುದ್ದಿಜಾಲ    ಸಿಟಿಜನ್ ಜರ್ನಲಿಸಂ    ಚಲನಚಿತ್ರ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಅಡುಗೆ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಮಹಾಚುನಾವಣೆ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
ಮುಖಪುಟ » ಸುದ್ದಿಜಾಲ » ವಾರ್ತೆಗಳು » ಪೂರ್ಣಪಾಠ
ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ
[IST]

President Pratibha inaugurates Buddha Vihar in Gulbarga
thatsKannada RSS feed thatsKannada igoogle gadgets FREE SMS alerts
ಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು.

ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, ಎಲ್ಲೋರಾ ಮಾದರಿಯ ಕಲೆ ಅಳವಡಿಸಿರುವುದು ವಿಶೇಷ. ರಾಮನಗರ ಜಿಲ್ಲೆ ಬಿಡದಿಯ ಅಶೋಕ ಗುಡಿಕಾರ, ಆರು ಅಡಿ ಎತ್ತರದ ಬುದ್ಧನ ವಿಗ್ರಹ ನಿರ್ಮಿಸಿ ಕಲಾ ಕೌಶಲ್ಯ ಪ್ರದರ್ಶಿಸಿದ್ದಾರೆ. ವಿಹಾರದ ನೆಲೆಮನೆ ಆವರಣದಲ್ಲಿ ಸುಮಾರು 2 ಸಾವಿರ ಭಕ್ತರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಕುಳಿತ ಬುದ್ಧನ ಮೂರ್ತಿ ನೋಡಲು ಬಲು ಆಕರ್ಷಣೀಯವಾಗಿದೆ. 400 ಪಂಚ ಲೋಹದಿಂದ ಈ ಮೂರ್ತಿಯನ್ನು ಸಿದ್ದಪಡಿಸಲಾಗಿದೆ. ಅದಕ್ಕೆ ಚಿನ್ನದ ಲೇಪನ ಮಾಡಲಾಗಿದೆ.

ವಿಹಾರದ ಹೊರಭಾಗದಲ್ಲಿರುವ ಸ್ತೂಪಗಳನ್ನು ಇಟಾಲಿಯನ್ ಮಾರ್ಬಲ್ ನಿಂದ ತಯಾರಿಸಲಾಗಿದೆ. ಅಶೋಕನ ಕಾಲದ ಮಾದರಿಯಂತೆ ನಾಲ್ಕು ದಿಕ್ಕುಗಳಲ್ಲಿ ಪಿಲ್ಲರ್ ಹಾಕಲಾಗಿದೆ. ರೋಸ್ ವುಡ್ ದ್ವಾರ ಅಳವಡಿಸಲಾಗಿದೆ. ಒಟ್ಟು ಆರು ದ್ವಾರಗಳ ಪೈಕಿ ಮೂರನ್ನು ಟೀಕ್ ವುಡ್ ನಿಂದ ನಿರ್ಮಿಸಲಾಗಿದೆ. ಮೈಸೂರು ಅರಮನೆ ಕಲಾವಿದ ಕುಟುಂಬದ ಕೈಸರ್ ಅಲಿ ಸಾಂಪ್ರದಾಯಿಕ ಮಾದರಿಯಲ್ಲಿ ಈ ದ್ವಾರ ನಿರ್ಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಪಾಲ ರಾಮೇಶ್ವಪ ಠಾಕೂರ್, ಸಿದ್ದಾರ್ಥ ವಿಹಾರ ಟ್ರಸ್ಟ್ ನ ಧರ್ಮದರ್ಶಿ ಹಾಗೂ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ. ರಾಧಾಬಾಯಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಸಚಿವರಾದ ಲಕ್ಷ್ಮಣ ಸವದಿ, ರೇವೂ ನಾಯಕ ಬೆಳಮಗಿ, ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

 

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]
ಇಂದ: ವೀರೇಶ್
ದಿನಾಂಕ: 08 Jan 2009 9:49 am
ಎಲ್ಲಿದ್ದೀರಾ ಬುದ್ಧಿ ಜೀವಿಗಳೇ ಹಿಂದೂ ಸ್ವಾಮಿಗಳು ಏನು ಮಾಡಿದರು ಹಣ ಪೋಲು ಮಾಡುತ್ತಾರೆಂದು ಬೊಬ್ಬೆ ಇಡುವ ನೀವು , ಇಷ್ಟೊಂದು ಹಣ ಪೋಳುಅದರು ಎರಡು ಮುಚ್ಚಿಕಿಂದು ಕುಲಿತಿದ್ದಿರ , ಇನ್ನಾದರೂ ಹಿಂದೂ ಸ್ವಾಮಿಗಳ ಬಗ್ಗೆ ತಪ್ಪು ಬರೆಯುವುದನ್ನ ಬಿಡಿ ಎಲ್ಲಿದೆ dss Gowri la nkesh

ಇಂದ: Krish
ದಿನಾಂಕ: 08 Jan 2009 1:23 am
Wow. More space for meditation and spirituality. Thanks to the people who made this possible.

[ ಅಭಿಪ್ರಾಯ ಬರೆಯಿರಿ ]
 
 
 
 ಬೆಂಗಳೂರ ಹೊಟೇಲುಗಳಲ್ಲಿ ವಿಶೇಷ ಕೊಡುಗೆ
 ಬಾಲಿಯಲ್ಲಿನ ಅತ್ಯಂತ ಜನಪ್ರಿಯ ಹೊಟೇಲುಗಳು
ThatsKannada
ThatsKannada
 ಅಡುಗೆಮನೆಯ ಗೊಣಗಾಟ ನಿಲ್ಲಿಸಲು ಇಲ್ಲಿವೆ ಕೆಲ ಉಪಾಯ
 ನಾಟಕ ವಿಮರ್ಶೆ : ಸೇವಂತಿ ಯಾ ಮಿಸ್ ಸೇವಂತಿ
 ಸಲಿಂಗಿಗಳ ಹೋರಾಟದ ಹಿಂದಿನ ಕೈ ಯಾರದು?
 ಸ್ವಿಟ್ಜರಲಂಡಲ್ಲಿ ಭೂತಕೋಲ ಮುಖವಾಡ ಪ್ರಾತ್ಯಕ್ಷಿಕೆ
 ಒಂದು ರುಚಿಕಟ್ಟಾದ ಪದಾರ್ಥ ಮತ್ತು ಪೇಚಿನ ಪ್ರಸಂಗ
ThatsKannada
ThatsKannada
ನಿಮ್ಮ ಮತ ಚಲಾಯಿಸಿ
ThatsKannada
ThatsKannada
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ThatsKannada
 
Recommended Links
     Become fans of Namitha, Trisha, Katrina, Deepika, Barbara Mori, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India