clear
clear
clear
clear
   
  BSE  16,848.83 +152.80   NSE  4998.95 +46.30   RS/$ 46.50 -0.21  at:16:10 Hrs (IST) Nov 13  
clear
  ಮುಖಪುಟ    ಜಾಹೀರಾತುದರ    ಸುದ್ದಿಜಾಲ    ಚಲನಚಿತ್ರ    ಅಡುಗೆ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಜಿಲ್ಲಾಸುದ್ದಿ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
ಮುಖಪುಟ » ಸುದ್ದಿಜಾಲ » ರಾಜಕೀಯ » ಪೂರ್ಣಪಾಠ
ಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?

HD Devegowda Left hook splits the JD(S)
ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಹಾಗೂ ಮುಂಬರುವ ಚುನಾವಣೆಗೆ ಮಾಡಬೇಕಾಗಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಇಂದು ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿತ್ತು. ಆದರೆ ಲೋಕಸಭಾ ಟಿಕೆಟ್ ವಂಚಿತರಾಗಿದ್ದ ಕೇರಳದ ವೀರೇಂದ್ರ ಕುಮಾರ್ ಅವರು ಎಡಪಕ್ಷಗಳಿಗೆ ಬೆಂಬಲ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಕ್ಯಾತೆ ತೆಗೆದಿದ್ದಾರೆ. ಅಮೆರಿಕದ ಯೇಲ್ ಕಾನೂನು ವಿವಿಯಲ್ಲಿ ಸಂಸದೀಯ ತರಬೇತಿ ಪಡೆದ ಹುರುಪಿನಿಂದ ನಿನ್ನೆಯಷ್ಟೇ ನಗರಕ್ಕೆ ಬಂದಿದ್ದ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ.

ಭಿನ್ನಮತ ತೋರುವ ನಾಯಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದೇವೇಗೌಡರು ಆಗಲೇ ಘೋಷಿಸಿದ್ದಾರೆ. ಅಲ್ಲದೇ, ಕೇರಳದಲ್ಲಿ ಎಡಪಕ್ಷಗಳಿಗೆ ಜೆಡಿಎಸ್ ಬೆಂಬಲ ನೀಡುವ ನಿಲುವಿಗೆ ಬದ್ಧರಾಗಿರುವ ಗೌಡರು, ವೀರೇಂದ್ರ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಬಿಜೆಪಿ ಜತೆಯಲ್ಲಿ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾದಾಗ ಇದೇ ವೀರೇಂದ್ರ ಕುಮಾರ್ ತಮ್ಮ ಅಸಮ್ಮತಿ ಸೂಚಿಸಿದ್ದರು.

ಆಡಳಿತಾರೂಢ ಎಡಪಕ್ಷಗಳನ್ನು ಬೆಂಬಲಿಸುವ ಬಗ್ಗೆ ಜುಲೈ 12ರಂದು ನಡೆಯಲಿರುವ ಕೇರಳ ಜೆಡಿಎಸ್ ಘಟಕದ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಎಂಪಿ ವೀರೇಂದ್ರ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದ ಕೋಳಿಕ್ಕೊಡ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್ ಗೆ ಟಿಕೆಟ್ ನೀಡಲು ಎಡಪಕ್ಷಗಳು ನಿರಾಕರಿಸಿದ್ದವು. ಈ ಹಿನ್ನೆಲೆಯಲ್ಲಿ ಎಲ್ ಡಿಎಫ್ ಗೆ ಬೆಂಬಲ ನೀಡಲು ವೀರೇಂದ್ರಕುಮಾರ್ ಅಸಮ್ಮತಿದ್ದಾರೆ.

(ದಟ್ಸ್ ಕನ್ನಡವಾರ್ತೆ)

ಜುಲೈ 4, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

 
 
 
 ಬೆಂಗಳೂರಲ್ಲಿರುವ ಸಸ್ತಾ ಹೊಟೇಲುಗಳು
 ಮಕಾವುನಲ್ಲಿರುವ ಐಷಾರಾಮಿ ಹೊಟೇಲುಗಳು
ThatsKannada
ThatsKannada
 ಸಮಾಜವೆಂಬ ಹೂವಿನ ಪಕಳೆಗಳು ಮಕ್ಕಳು
 ಮಕ್ಕಳ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸೋಣ
 ಕಾರವಾರದ ರಿವರ್ ಎಡ್ಜ್ ರೆಸಾರ್ಟಿಗೆ ಪಿಕ್ನಿಕ್
 ಕಾರ್ತೀಕ ಶುಕ್ಲ ದ್ವಾದಶಿಗೆ ಸ್ಪೆಷಲ್ ಸಾರು
 ಕನೆಕ್ಟೀಕಟ್‍ನಲ್ಲಿ ಹರಡಿದ ಕನ್ನಡದ ಕಂಪು
ThatsKannada
ThatsKannada
ThatsKannada
ThatsKannada
 ದಟ್ಸ್ ಕನ್ನಡ ಮಿತವ್ಯಯ ಜಾಹೀರಾತು ದರಗಳು
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ನಿಮ್ಮ ಮತ ಚಲಾಯಿಸಿ
ThatsKannada
Recommended Links
     Become fans of Namitha, Trisha, Katrina, Deepika, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India