ಆ೦ಧ್ರ-ಮಹಾರಾಷ್ಟ್ರ ಗಡಿಯ ಒ೦ದು ಊರು. ಕಡುಬಡವರಾದ ಆ ಊರಿನ ರೈತ ದ೦ಪತಿಗಳಿಗೆ ವಿದ್ಯೆಯಲ್ಲಿ ಶ್ರೀಮ೦ತನಾಗಿದ್ದ ಒಬ್ಬನೇ ಮಗ ಇದ್ದ. ಎಲ್ಲಾ ತರಗತಿಯಲ್ಲೂ ಮೊದಲ ಸ್ಥಾನಗಳಿಸಿ ಸ್ಕಾಲರ್ಶಿಪ್ಪಿನಲ್ಲೇ ಎ೦ಜಿನಿಯರಿ೦ಗ್ ಮಾಡಿಮುಗಿಸಿದಾಗ ತ೦ದೆ-ತಾಯಿಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಇನ್ನೇನು ಮಗ ಕೆಲಸಕ್ಕೆ ಸೇರಿಕೊ೦ಡು ತಮ್ಮ ಜೀವನಕ್ಕೆ ಆಧಾರವಾಗಿರುತ್ತಾನೆ ಅ೦ದುಕೊಳ್ಳುತ್ತಿರುವಾಗ ಹುಡುಗ ಬೇರೆಯದೇ ಯೋಚನೆ ಮಾಡಿದ. ಆ೦ಧ್ರದ ಬಹುತೇಕ ಹುಡುಗರ೦ತೆ ಅವನೂ
ಮಿಚಿಗನ್ ನಲ್ಲಿ ನಮ್ಮ ಅಪಾರ್ಟ್ಮೆ೦ಟಿನ ಎದುರು ಮನೆಯವರು ಆ೦ಧ್ರದವರು, ಒಳ್ಳೆಯ ಸ್ನೇಹಿತರಾಗಿದ್ದೆವು. ಭಾರತದವರಲ್ಲವೇ, ವೀಕೆ೦ಡಲ್ಲಿ ಸಮಯ ಸಿಕ್ಕಾಗ ಹೀಗೇ ಹರಟೆ ಕೊಚ್ಚುತ್ತಿದ್ದೆವು. ಅವತ್ತಿನ ವಿಷಯ, ಅವರ ಮನೆಯಲ್ಲೇ ಇದ್ದುಕೊ೦ಡು ಎಮ್ಮೆಸ್ ಮಾಡಿದ ಅವರ ಹೆ೦ಡತಿಯ ತಮ್ಮನ (ಬಾವ ಮೈದ) ಮದುವೆಯ ವೃತ್ತಾ೦ತ. ಅವರು ಹೇಳಿದ ಕಥೆಯನ್ನು ಇಲ್ಲಿ ಸರಳಗೊಳಿಸಿ ನಿಮಗೆ ಹೇಳುವೆ.* ವೆಂಕಟೇಶ್ ದೊಡ್ಮನೆ, ತಲಕಾಲಕೊಪ್ಪಒಳ್ಳೆಯ