ವಿಷ್ಣುವರ್ಧನ್ ಅಭಿನಯದ 'ಬಂಧನ' ಚಿತ್ರದಲ್ಲಿ ಸುಹಾಸಿನಿ ಮತ್ತು ಜೈ ಜಗದೀಶ್ ಗಂಡ ಹೆಂಡತಿಯಾಗಿ ಅಮೋಘ ಅಭಿನಯ ನೀಡಿದ್ದರು. 'ಬಂಧನ' ಚಿತ್ರದ ''ಈ ಬಂಧನಾ ಜನುಮ ಜನುಮದ ಅನುಬಂಧನ...'' ಹಾಡು ಕೇಳಿದರೆ ಇಂದಿಗೂ ಪ್ರೇಕ್ಷಕರು ಪುಳಕಗೊಳ್ಳುತ್ತಾರೆ. ಸುಹಾಸಿನಿ ಮತ್ತು ಜೈಜಗದೀಶ್ ಕಾಂಬಿನೇಷನ್ ನಲ್ಲಿ ಬಂದ ಈ ಚಿತ್ರ ಅದ್ಭುತ ಯಶಸ್ಸು ದಾಖಲಿಸಿತ್ತು. ಇದೀಗ ಇದೇ ಜೋಡಿ ಮತ್ತೊಂದು ಚಿತ್ರದಲ್ಲಿ
ಸಂಜು ವೆಡ್ಸ್ ಗೀತಾ ಚಿತ್ರದ ಮುಹೂರ್ತ ಶುಕ್ರವಾರ(ಅ.30) ಕಂಠೀರವ ಸ್ಟುಡಿಯೋದಲ್ಲಿ ನೆರೆವೇರಿತು. ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ಶ್ರೀನಗರ ಕಿಟ್ಟ್ಟಿ ಜತೆ ನಟಿ ರಮ್ಯಾ ನಟಿಸುತ್ತಿದ್ದಾರೆ. ಮೈಸೂರಿನಲ್ಲಿ 'ಸ್ವಯಂವರ' ಚಿತ್ರವನ್ನು ಮುಗಿಸಿಕೊಂಡು ಸಂಜು ವೆಡ್ಸ್ ಗೀತಾ ಚಿತ್ರಕ್ಕಾಗಿ ಕಿಟ್ಟಿ ಬೆಂಗಳೂರಿಗೆ ಆಗಮಿಸಿದ್ದರು.'ಅರಮನೆ' ಖ್ಯಾತಿಯ ನಾಗಶೇಖರ್ ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಆಕ್ಷನ್, ಕಟ್ ಹೇಳುತ್ತಿದ್ದಾರೆ.
ಶಂಕರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಜಸ್ಟ್ ಮಾತ್ ಮಾತಲಿ‘ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ನಡೆಯುತ್ತಿದೆ ಎಂದು ನಿರ್ಮಾಪಕ ಆರ್.ಶಂಕರ್ ತಿಳಿಸಿದ್ದಾರೆ. ಕನ್ನಡದಲ್ಲಿ ಈವರೆಗೂ ಸಾಕಷ್ಟು ಚಿತ್ರಗಳನ್ನು ನಿರ್ಮಿಸಿರುವ ಶಂಕರ್ ಅವರು ಸುದೀಪ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಹಾಗೂ ಸುದೀಪ್ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಚಿತ್ರದಲ್ಲಿ ನಿರ್ದೇಶಕನ
ಬೆಂಗಳೂರು, ಅ, 16 : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ತೀವ್ರ ಟೀಕೆ ಟಿಪ್ಪಣಿಗಳ ಬಂದ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರ ಕಲಾವಿದರು ಕೊನೆಗೂ ಧರೆಗಿಳಿದಿದ್ದಾರೆ. ಪ್ರವಾಹ ಪೀಡಿತ ಜನರ ನೆರವಿಗೆ ಚಿತ್ರರಂಗದ ನಟನಟಿಯರು ಬೀದಿಗಿಳಿದು ದೇಣಿಗೆ ಸಂಗ್ರಹಿಸಿದರು. ಹಿರಿಯ ಕಲಾವಿದರು ಜೋಳಿಗೆ ಹಿಡಿದು ಬೀದಿಗಿಳಿದಾಗ ಸಾರ್ವಜನಿಕರು, ಸಂಘ ಸಂಸ್ಥೆಗಳು ತಮ್ಮ ಕೈಲಾದಷ್ಟು ಸಹಾಯ ಮಾಡಿದರು. ಹಿರಿಯ ನಟರಾದ ಅಂಬರೀಷ್,
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಬೆಂಗಳೂರಿನ ಮಕ್ಕಳ ಮನಸ್ಸನ್ನು ಗೆದ್ದಿದ್ದಾರೆ! ಬೆಂಗಳೂರಿನ ಮಕ್ಕಳು ರಮ್ಯಾ ಮತ್ತು ಗಣೇಶ್ ಅವರನ್ನು ಇಷ್ಟಪಟ್ಟಿದ್ದಾರೆ. ಆದರೆ ಬೆಂಗಳೂರಿನ ಯುವಕರು ಮಾತ್ರ ಬಾಲಿವುಡ್ ತಾರೆಗಳಿಗೆ ಹೃದಯ ಕೊಟ್ಟಿದ್ದಾರೆ ಎಂದು ಸಮೀಕ್ಷೆಯೊಂದರಿಂದ ದೃಢಪಟ್ಟಿದೆ!ಜನಪ್ರಿಯ ಮಕ್ಕಳ ವಾಹಿನಿ ಟರ್ನಲ್ ಇಂಟರ್
'ಸಂಜು ವೆಡ್ಸ್ ಗೀತಾ' ಚಿತ್ರದಿಂದ ನಟಿ ರಮ್ಯಾ ಅವರನ್ನು ಕೈಬಿಡಲಾಗಿದೆ ಎಂಬ ಸುದ್ದಿಯನ್ನು ನಟ, ನಿರ್ದೇಶಕ ನಾಗಶೇಖರ್ ಅಲ್ಲಗಳೆದಿದ್ದಾರೆ. ನಾಯಕ ನಟ ಶ್ರೀನಗರ ಕಿಟ್ಟಿಯೊಂದಿಗೆ ಈ ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ನಟಿಸಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಗೀತಾ ಪಾತ್ರಕ್ಕಾಗಿ ರಮ್ಯಾಗಿಂತಲೂ ಉತ್ತಮ ನಟಿ ಮತ್ತೊಬ್ಬರಿಲ್ಲ ಎಂಬುದು ನಾಗಶೇಖರ್ ಕೊಡುವ ವಿವರಣೆ. ಹಾಗೆಯೇ
ಸ್ಪರ್ಶ' ಚಿತ್ರದ ಮೂಲಕ ನಾಯಕನಾಗಿ ಪರಿಚಿತರಾದ ಸುದೀಪ್ 'ಮೈ ಆಟೋಗ್ರಾಫ್' ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕರೂ ಆದರು. ಪ್ರಸ್ತುತ ಅವರ ನಟನೆ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ 'ಜಸ್ಟ್ ಮಾತ್ ಮಾತಲಿ.'ಬೆಂಗಳೂರಿನಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸಿದ ಚಿತ್ರತಂಡ ಹಾಡಿನ ಚಿತ್ರೀಕರಣಕ್ಕಾಗಿ ದೂರದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿತು. ಅಲ್ಲಿ ಸುದೀಪ್, ರಾಜೇಶ್ ಹಾಗೂ ಅವಿನಾಶ್ ಅವರ ಅಭಿನಯದಲ್ಲಿ
ಇತ್ತೀಚೆಗಷ್ಟೆ 'ಕರಿ ಚಿರತೆ' ಚಿತ್ರತಂಡಮೈಸೂರಿನಿಂದ ಹಿಂತಿರುಗಿದೆ. ಹೊಡೆದಾಟದ ದೃಶ್ಯಗಳಲ್ಲಿ ಭಾಗವಹಿಸಿದ್ದ ಚಿತ್ರದನಾಯಕ ನಟ ವಿಜಯ್ ಸುಸ್ತಾಗಿದ್ದಾರಂತೆ. ಸದ್ಯಕ್ಕೆ ಆಶ್ರಮವೊಂದರಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವುದಾಗಿ ವಿಜಯ್ ತಿಳಿಸಿದ್ದಾರೆ. ಶರ್ಮಿಳಾ ಮಾಂಡ್ರೆ ಈ ಚಿತ್ರದ ನಾಯಕಿ. **ಜಸ್ಟ್ ಮಾತ್ ಮಾತಲ್ಲಿ ಚಿತ್ರ ಸಿಂಗಪುರಕ್ಕೆ ತೆರಳಿದೆ. ಅಂತಿಮ ಚಿತ್ರೀಕರಣವನ್ನು ಮುಗಿಸಿಕೊಂಡು ಶೀಘ್ರದಲ್ಲೇ ಚಿತ್ರತಂಡ ಹಿಂತಿರುಗಲಿದೆ. ಮುಖ್ಯವಾದ ಸಮಾಚಾರವೆಂದರೆ ನಟಿ ರಮ್ಯಾ ಅವರನ್ನು ಸಿಂಗಪುರ
ನಟಿ ರಮ್ಯಾ ಉದ್ಧಟತನಕ್ಕೆ ಬೆಲೆ ತೆರಬೇಕಾದ ಪರಿಸ್ಥಿತಿ ಬಂದಿದೆಯೇ? ಹೌದು ಎನ್ನುತ್ತಿವೆ ಗಾಂಧಿನಗರದ ಮೂಲಗಳು. ಜಸ್ಟ್ ಮಾತ್ ಮಾತಲ್ಲಿ ಚಿತ್ರೀಕರಣ ವೇಳೆ ಅಸಭ್ಯವಾಗಿ ನಡೆದುಕೊಂಡಿಕ್ಕೆ ಸಂಜು ವೆಡ್ಸ್ ಗೀತಾ ಚಿತ್ರದಿಂದ ಆಕೆಗೆ ಗೇಟ್ ಪಾಸ್ ನೀಡಲಾಗಿದೆಯಂತೆ. ಈ ಚಿತ್ರದ ನಾಯಕ ನಟ ಶ್ರೀನಗರ ಕಿಟ್ಟಿ ಎಂಬುದು ಗೊತ್ತೇ ಇದೆ. ನೃತ್ಯ ನಿರ್ದೇಶಕ ಹರ್ಷ ಅವರೊಂದಿಗೆ ರಮ್ಯಾ ಅಸಂಬದ್ಧವಾಗಿ
ಯೋಗೀಶ್ ಅಲಿಯಾಸ್ ಲೂಸ್ ಮಾದನ ಬಹುದಿನಗಳ ಕನಸು ನನಸಾಗುವ ಕಾಲ ಸಮೀಪಿಸಿದೆ. ನಟಿ ರಮ್ಯಾ ಅವರೊಂದಿಗೆ ಅಭಿನಯಿಸಬೇಕು ಎಂದು ಯೋಗೀಶ್ ಕನಸು ಕಂಡಿದ್ದ. ಆಕೆಯ ಜತೆ ಒಂದೇ ಒಂದು ಚಿತ್ರದಲ್ಲಾದರೂ ಅಭಿನಯಿಸಬೇಕು ಎಂದು ಹಂಬಲಿಸುತ್ತಿದ್ದ. ಇದೀಗ ಆ ದಿನ ಬಂದೇ ಬಿಟ್ಟಿದೆ!ವಿಜಯಪ್ರಸಾದ್ ನಿರ್ದೇಶನದ ಈ ಚಿತ್ರಕ್ಕೆ 'ಸಿದ್ಧಲಿಂಗು' ಎಂದು ಹೆಸರಿಡಲಾಗಿದೆ. ಹೆಸರೇ ಸೂಚಿಸುವಂತೆ ಇದೊಂದು ಪಕ್ಕಾ ಹಾಸ್ಯ